April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಯುವ ಜೇಸಿಗಳಿಗೆ ‘ಗೈಡಡ್ ಬೈ ಪರ್ಪೋಸ್’ ಎಂಬ ವಿಶೇಷ ತರಬೇತಿ ದಿನಾಚರಣೆ ಮೇ. 28 ರಂದು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ನಡೆಸಲಾಯಿತು.

ತರಬೇತಿ ಶಿಬಿರವನ್ನು ವಲಯ 15 ಯುವ ಜೇಸಿ ವಿಭಾಗದ ನಿರ್ದೇಶಕರಾದ ಶ್ರೀಮತಿ ಸ್ವಾತಿ ಜಗನ್ನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.

ವಲಯ ತರಬೇತುದಾರ ಶಂಕರ್ ರಾವ್ ಅವರು ತರಬೇತಿ ನೀಡಿದರು. ಜೇಸಿ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಯುವ ಜೇಸಿಗಳಾದ ಕು. ಹರ್ಷಿತಾ, ಕು. ಅನನ್ಯ ಅವರು ಕ್ರಮವಾಗಿ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ
ಪರಿಚಯ ಮಾಡಿದರು. ಸಾತ್ವಿಕ್, ಕು. ನಿಶಿತಾ , ಕು. ಅನನ್ಯ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ತಿಳಿಸಿದರು.

ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್, ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ., ಸದಸ್ಯರಾದ ರಾಜಾರಾಮ, ಶ್ರೀಮತಿ ಜೆಸಿಂತಾ ಡಿ ಸೋಜ, ಶ್ರೀಮತಿ ಮನೋರಮಾ, ಜೋಸೆಫ್ ಪಿರೇರಾ, ಉಪಾಧ್ಯಕ್ಷ ಯು. ನರಸಿಂಹ ನಾಯಕ್, ಕೋಶಾಧಿಕಾರಿ ಜಸ್ವಂತ್ ಪಿರೇರಾ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!