September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಯುವ ಜೇಸಿಗಳಿಗೆ ‘ಗೈಡಡ್ ಬೈ ಪರ್ಪೋಸ್’ ಎಂಬ ವಿಶೇಷ ತರಬೇತಿ ದಿನಾಚರಣೆ ಮೇ. 28 ರಂದು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ನಡೆಸಲಾಯಿತು.

ತರಬೇತಿ ಶಿಬಿರವನ್ನು ವಲಯ 15 ಯುವ ಜೇಸಿ ವಿಭಾಗದ ನಿರ್ದೇಶಕರಾದ ಶ್ರೀಮತಿ ಸ್ವಾತಿ ಜಗನ್ನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.

ವಲಯ ತರಬೇತುದಾರ ಶಂಕರ್ ರಾವ್ ಅವರು ತರಬೇತಿ ನೀಡಿದರು. ಜೇಸಿ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಯುವ ಜೇಸಿಗಳಾದ ಕು. ಹರ್ಷಿತಾ, ಕು. ಅನನ್ಯ ಅವರು ಕ್ರಮವಾಗಿ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ
ಪರಿಚಯ ಮಾಡಿದರು. ಸಾತ್ವಿಕ್, ಕು. ನಿಶಿತಾ , ಕು. ಅನನ್ಯ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ತಿಳಿಸಿದರು.

ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್, ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ., ಸದಸ್ಯರಾದ ರಾಜಾರಾಮ, ಶ್ರೀಮತಿ ಜೆಸಿಂತಾ ಡಿ ಸೋಜ, ಶ್ರೀಮತಿ ಮನೋರಮಾ, ಜೋಸೆಫ್ ಪಿರೇರಾ, ಉಪಾಧ್ಯಕ್ಷ ಯು. ನರಸಿಂಹ ನಾಯಕ್, ಕೋಶಾಧಿಕಾರಿ ಜಸ್ವಂತ್ ಪಿರೇರಾ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
error: Content is protected !!