ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು .

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕಿ ಸುಪ್ರಿತ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ, ಪಂಚಾಯತ್ ಸದಸ್ಯ ರಾದ ಆಶಲತಾ , ಮಹೇಶ , ಆರ್ಥಿಕ ಸಮಾಲೋಚಕರು ಅದ ಉಷಾ , ಗ್ರಂಥಾಲಯ ಮೇಲ್ವಿಚಾರಕಿ , ಪಂಚಾಯತ್ ಸಿಬ್ಬಂದಿ ಗಳು , ಸಂಜೀವಿನಿ ಒಕ್ಕೂಟ ಅಧ್ಯಕ್ಷ ರು ,ಉಪಸ್ಥಿತರಿದ್ದರು .

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Leave a Comment

error: Content is protected !!