37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು ಜೆಪಿ ನಗರದ ಪರೋಸಾ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಬೆಂಗಳೂರಿನ ಯುವಕನಿಗೆ ಕರೆ ಮಾಡಿ ದಾರಿ ತಪ್ಪಿರುವ ವಿಷಯ ತಿಳಿಸಿ ಆ ಯುವಕ ಚಾರ್ಮಾಡಿಯ ಹನೀಫ್ ರವರಿಗೆ ತಿಳಿಸಿ ಅವರ ತಂಡದ ಜೊತೆ ಹುಡುಕಾಟ ನಡೆಸಿದ್ದಾರೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿಯಾಗಿತ್ತು. ಇಲ್ಲಿನ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ಪಡಬೇಕಾಯಿತು.


ಬಂಡಾಜೆ ಫಾಲ್ಸ್ ನ ತಳ ಹಾಗೂ ಇತರ ಕೆಲವು ಭಾಗಗಳು ದಕ ಜಿಲ್ಲೆ ವ್ಯಾಪ್ತಿಯಲ್ಲಿದ್ದು ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿದ್ದರು.


ಪ್ರದೇಶವು ಸಂಪೂರ್ಣ ಕತ್ತಲ ಪರಿಸರ ಹಾಗೂ ಕಾಡಾನೆ ಸಹಿತ ಇತರ ವನ್ಯಜೀವಿಗಳು ಸಂಚರಿಸುವ ಸ್ಥಳವಾಗಿದ್ದು ಹಲವು ರೀತಿಯ ಅಪಾಯಗಳ ಮಧ್ಯೆ ಹುಡುಕಾಟ ನಡೆಸಲಾಗಿತ್ತು.


ಆಗಾಗ ಮೊಬೈಲ್ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿ,
ಹುಡುಕಾಟ ಮುಂದುವರಿಸಿದ್ದರು. ರಾತ್ರಿ ಚಾರ್ಮಾಡಿ ವ್ಯಾಪ್ತಿಯ ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿ ಪತ್ತೆ ಹಚ್ಚಿದ್ದಾರೆ.

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!