23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು ಜೆಪಿ ನಗರದ ಪರೋಸಾ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಬೆಂಗಳೂರಿನ ಯುವಕನಿಗೆ ಕರೆ ಮಾಡಿ ದಾರಿ ತಪ್ಪಿರುವ ವಿಷಯ ತಿಳಿಸಿ ಆ ಯುವಕ ಚಾರ್ಮಾಡಿಯ ಹನೀಫ್ ರವರಿಗೆ ತಿಳಿಸಿ ಅವರ ತಂಡದ ಜೊತೆ ಹುಡುಕಾಟ ನಡೆಸಿದ್ದಾರೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿಯಾಗಿತ್ತು. ಇಲ್ಲಿನ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ಪಡಬೇಕಾಯಿತು.


ಬಂಡಾಜೆ ಫಾಲ್ಸ್ ನ ತಳ ಹಾಗೂ ಇತರ ಕೆಲವು ಭಾಗಗಳು ದಕ ಜಿಲ್ಲೆ ವ್ಯಾಪ್ತಿಯಲ್ಲಿದ್ದು ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿದ್ದರು.


ಪ್ರದೇಶವು ಸಂಪೂರ್ಣ ಕತ್ತಲ ಪರಿಸರ ಹಾಗೂ ಕಾಡಾನೆ ಸಹಿತ ಇತರ ವನ್ಯಜೀವಿಗಳು ಸಂಚರಿಸುವ ಸ್ಥಳವಾಗಿದ್ದು ಹಲವು ರೀತಿಯ ಅಪಾಯಗಳ ಮಧ್ಯೆ ಹುಡುಕಾಟ ನಡೆಸಲಾಗಿತ್ತು.


ಆಗಾಗ ಮೊಬೈಲ್ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿ,
ಹುಡುಕಾಟ ಮುಂದುವರಿಸಿದ್ದರು. ರಾತ್ರಿ ಚಾರ್ಮಾಡಿ ವ್ಯಾಪ್ತಿಯ ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿ ಪತ್ತೆ ಹಚ್ಚಿದ್ದಾರೆ.

Related posts

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!