22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya
error: Content is protected !!