September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

ಬೆಳಾಲು : ಮೇ 31 ಬೆಳಾಲು ಗ್ರಾಮದ‌ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸಂತೋಷ ಮಡಿವಾಳ ಇವರು ದೀಪ ಬೆಳಗಿಸಿ ಈ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬೆಳಾಲು ಗ್ರಾ.ಪಂ ಸದಸ್ಯೆ ಶ್ರೀಮತಿ ‌ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ ಹಾಗೂ ಉದ್ಯಮಿ ಜಯಣ್ಣ ಮಿನಂದೇಲು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು,ಸಹ ಶಿಕ್ಷಕಿ ಜಯಶ್ರೀ ವಂದಿಸಿದರು.ಗೌರವ ಶಿಕ್ಷಕಿ ಭವ್ಯಶ್ರೀ ಸಹಕರಿಸಿದರು ಜಯಣ್ಣ ಮಿನಂದೇಲು ಇವರನ್ನು ಗೌರವಿಸಲಾಯಿತು.
ಎಸ್.ಡಿ.ಎಂ.ಸಿ ಸದಸ್ಯರು ,ಪೋಷಕರು,ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಪುಷ್ಪಗುಚ್ಚ ನೀಡಿ ಆರತಿ ಎತ್ತಿ ತಿಲಕವಿಟ್ಟು ಶಾಲೆಗೆ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ,ಓದುವ ಪುಸ್ತಕ‌, ಕ್ರೇಯಾನ್ಸ್, ರಬ್ಬರ್ ಪೆನ್ಸಿಲ್ ನ್ನು ಉದ್ಯಮಿ ಜಯಣ್ಣ ಮಿನಂದೇಲು ನೀಡಿ ಸಹಕರಿಸಿದರು ಹಾಗೂ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು ಆಕರ್ಷಣಿಯವಾಗಿತ್ತು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!