22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ

ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya
error: Content is protected !!