23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

ಬೆಳಾಲು : ಮೇ 31 ಬೆಳಾಲು ಗ್ರಾಮದ‌ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸಂತೋಷ ಮಡಿವಾಳ ಇವರು ದೀಪ ಬೆಳಗಿಸಿ ಈ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬೆಳಾಲು ಗ್ರಾ.ಪಂ ಸದಸ್ಯೆ ಶ್ರೀಮತಿ ‌ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ ಹಾಗೂ ಉದ್ಯಮಿ ಜಯಣ್ಣ ಮಿನಂದೇಲು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು,ಸಹ ಶಿಕ್ಷಕಿ ಜಯಶ್ರೀ ವಂದಿಸಿದರು.ಗೌರವ ಶಿಕ್ಷಕಿ ಭವ್ಯಶ್ರೀ ಸಹಕರಿಸಿದರು ಜಯಣ್ಣ ಮಿನಂದೇಲು ಇವರನ್ನು ಗೌರವಿಸಲಾಯಿತು.
ಎಸ್.ಡಿ.ಎಂ.ಸಿ ಸದಸ್ಯರು ,ಪೋಷಕರು,ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಪುಷ್ಪಗುಚ್ಚ ನೀಡಿ ಆರತಿ ಎತ್ತಿ ತಿಲಕವಿಟ್ಟು ಶಾಲೆಗೆ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ,ಓದುವ ಪುಸ್ತಕ‌, ಕ್ರೇಯಾನ್ಸ್, ರಬ್ಬರ್ ಪೆನ್ಸಿಲ್ ನ್ನು ಉದ್ಯಮಿ ಜಯಣ್ಣ ಮಿನಂದೇಲು ನೀಡಿ ಸಹಕರಿಸಿದರು ಹಾಗೂ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು ಆಕರ್ಷಣಿಯವಾಗಿತ್ತು.

Related posts

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya
error: Content is protected !!