September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

ಬೆಳಾಲು : ಮೇ 31 ಬೆಳಾಲು ಗ್ರಾಮದ‌ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸಂತೋಷ ಮಡಿವಾಳ ಇವರು ದೀಪ ಬೆಳಗಿಸಿ ಈ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬೆಳಾಲು ಗ್ರಾ.ಪಂ ಸದಸ್ಯೆ ಶ್ರೀಮತಿ ‌ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ ಹಾಗೂ ಉದ್ಯಮಿ ಜಯಣ್ಣ ಮಿನಂದೇಲು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು,ಸಹ ಶಿಕ್ಷಕಿ ಜಯಶ್ರೀ ವಂದಿಸಿದರು.ಗೌರವ ಶಿಕ್ಷಕಿ ಭವ್ಯಶ್ರೀ ಸಹಕರಿಸಿದರು ಜಯಣ್ಣ ಮಿನಂದೇಲು ಇವರನ್ನು ಗೌರವಿಸಲಾಯಿತು.
ಎಸ್.ಡಿ.ಎಂ.ಸಿ ಸದಸ್ಯರು ,ಪೋಷಕರು,ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಪುಷ್ಪಗುಚ್ಚ ನೀಡಿ ಆರತಿ ಎತ್ತಿ ತಿಲಕವಿಟ್ಟು ಶಾಲೆಗೆ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ,ಓದುವ ಪುಸ್ತಕ‌, ಕ್ರೇಯಾನ್ಸ್, ರಬ್ಬರ್ ಪೆನ್ಸಿಲ್ ನ್ನು ಉದ್ಯಮಿ ಜಯಣ್ಣ ಮಿನಂದೇಲು ನೀಡಿ ಸಹಕರಿಸಿದರು ಹಾಗೂ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು ಆಕರ್ಷಣಿಯವಾಗಿತ್ತು.

Related posts

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya
error: Content is protected !!