23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆರಂಭೋತ್ಸವವನ್ನು ಉಜಿರೆ ಶ್ರೀ ಧ ಮಂ ಎಜ್ಯುಕೇಶನಲ್ ಸೊಸೈಟಿ(ರಿ.) ಇದರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಬಿ. ಸೋಮಶೇಖರ ಶೆಟ್ಟಿಯವರು ಉದ್ಘಾಟಿಸಿ ಮಾತನಾಡುತ್ತಾ, ಪ್ರೌಢಶಾಲೆಗೆ ಬರುವಾಗಲೆ ವಿದ್ಯಾರ್ಥಿಗಳಲ್ಲಿ ತನ್ನ ಜೀವನದ ಮುಂದಿನ ಗುರಿಯ ಬಗ್ಗೆ ಸ್ಪಷ್ಟ ನಿಲುವು ಅಗತ್ಯ. ಆ ಗುರಿಯನ್ನು ತಲಪುವಲ್ಲಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಏಕಾಗ್ರತೆ ಅವಶ್ಯಕ. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳೆಲ್ಲ ಗುಣಮಟ್ಟಕ್ಕೆ ಹೆಸರಾಗಿದೆ. ಇಲ್ಲಿ ಜೀವನ ಶಿಕ್ಷಣ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ಕೊಡಲಾಗುತ್ತದೆ. ಶಿಕ್ಷಣ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗಬಾರದು ಎಂದು
ಹೇಳಿದರು.

ಅತಿಥಿಗಳಾಗಿ ಆಗಮಿಸಿದ ಆಡಳಿತ ಮಂಡಳಿಯ ಮಾನವ ಸಂಪನ್ಮೂಲ ಅಧಿಕಾರಿ ಕೃಷ್ಣ ಮಯ್ಯರವರು ಶುಭಹಾರೈಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ ಮತ್ತು ಶಾಲೆಯ ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಸ್ವಾಗತಿಸಿ , ಶಿಕ್ಷಕಿ ವಾರಿಜ ಎಸ್ ಗೌಡರವರು ವಂದಿಸಿದರು. ಶಿಕ್ಷಕರಾದ ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!