22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ

ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
error: Content is protected !!