23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ಬಲೂನ್ ಗಳನ್ನು ನೀಡಿ, ಆರತಿ ಬೆಳಗಿ ಶಾಲೆಗೆ ಸ್ವಾಗತಿಸಿದರು. ಸಾಲು ಹಣತೆಗಳನ್ನು ಹಚ್ಚಿ, ಮಗುವಿನ ಜೋಳಿಗೆ ತುಂಬಿಸುವ ಮೂಲಕ ವಿನೂತನವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಉಚಿತ ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಪ್ರಾಯೋಜಿತ ಉಚಿತ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು. ತಳಿರು ತೋರಣ, ರಂಗೋಲಿಗಳಿಂದ ಶಾಲೆಯನ್ನು ಅಲಂಕರಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಅಜ್ಜಾಡಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸದಾಶಿವ ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ರಾಘವೇಂದ್ರ ಭಟ್, ಅಧ್ಯಕ್ಷರಾದ ಸಂತೋಷ್ ಮಂಜಿಲ, ಪ್ರದೀಪ್ , ಶಾಲಾ ಮುಖ್ಯ ಶಿಕ್ಷಕರಾದ ಸುಮಿತ್ರಾ ಎಸ್, ಶಿಕ್ಷಕರು, ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!