23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

ಅಳದಂಗಡಿ: ಕರಂಬಾರು ಗ್ರಾಮದ ಊರ ನಿವಾಸಿ ಶ್ರೀಮತಿ ಸುಶೀಲರವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮ್ರಾಗಿ ವಿತರಣಾ ಕಾರ್ಯಕ್ರಮ‌ ನಡೆಯಿತು.

ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಹಲವಾರು ಅಶಕ್ತ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿ ವಿತರಣೆ, ಆರೋಗ್ಯ ನಿಧಿ ವಿತರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊನ್ನಯ್ಯ ಕುಲಾಲ್ ನಡೆಸುತ್ತಿರುವ ಶ್ರೀ ಗುರು ಚೈತನ್ಯ ವೃದ್ದಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿ ದೇಣಿಗೆ ನೀಡಿ ಎಲ್ಲರ ಮೆಚ್ಚುಗೆ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ, ಊರ ಮತ್ತು ಸಹೋದರರು,ಕಿರಣ್ ಕುಮಾರ್ ಮಂಜಿಲ, ರತ್ನಾಕರ ಬುಣ್ಣನ್ ,ರಾಜೇಶ್ ಮೂಡುಕೋಡಿ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಸುರೇಂದ್ರ ಕುಮಾರ್ ಮುಂಬಯಿ, ದೇವದಾಸ್ ಆಲಡ್ಕ, ಗುರುವಪ್ಪ ಪೂಜಾರಿ, ಹರೀಶ್ ಕುಲಾಲ್, ಶುಭಕರ ಪೂಜಾರಿ, ಕಮಲಾಕ್ಷ ಉಂಗಿಲಬೈಲು ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸರ್ವ ಸದಸ್ಯರು ಉಪಸ್ಥಿತರಿದ್ದರು

ಆಗಮಿಸಿದ ಗಣ್ಯ ಅತಿಥಿಗಳನ್ನು ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿದರು.

Related posts

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!