23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ತೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ಅವರ ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಅವರ ಶ್ರಮ ಅಪಾರವಿದೆ.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿ ಗೌರವಿಸಿದ್ದರು.

ಅವರು ತಂದೆ ಆದಂ , ತಾಯಿ ಅವ್ವಮ್ಮ , ಪತಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya
error: Content is protected !!