32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಜಿ ಗೌಡ, ಅಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ, ಅಬೂಬಕ್ಕರ್ ಉಪಾಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಶೀಲಾವತಿ ಸದಸ್ಯರು, ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಗೀತಾ ಹಿರಿಯ ಶಿಕ್ಷಕಿ ಮಕ್ಕಳಿಗೆ ಶುಭ ಹಾರೈಸಿದರು.

ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು. ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya
error: Content is protected !!