ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

Updated on:

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಜಿ ಗೌಡ, ಅಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ, ಅಬೂಬಕ್ಕರ್ ಉಪಾಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಶೀಲಾವತಿ ಸದಸ್ಯರು, ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಗೀತಾ ಹಿರಿಯ ಶಿಕ್ಷಕಿ ಮಕ್ಕಳಿಗೆ ಶುಭ ಹಾರೈಸಿದರು.

ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು. ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Leave a Comment

error: Content is protected !!