24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಜಿ ಗೌಡ, ಅಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ, ಅಬೂಬಕ್ಕರ್ ಉಪಾಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಶೀಲಾವತಿ ಸದಸ್ಯರು, ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಗೀತಾ ಹಿರಿಯ ಶಿಕ್ಷಕಿ ಮಕ್ಕಳಿಗೆ ಶುಭ ಹಾರೈಸಿದರು.

ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು. ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!