25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆರಂಭೋತ್ಸವವನ್ನು ಉಜಿರೆ ಶ್ರೀ ಧ ಮಂ ಎಜ್ಯುಕೇಶನಲ್ ಸೊಸೈಟಿ(ರಿ.) ಇದರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಬಿ. ಸೋಮಶೇಖರ ಶೆಟ್ಟಿಯವರು ಉದ್ಘಾಟಿಸಿ ಮಾತನಾಡುತ್ತಾ, ಪ್ರೌಢಶಾಲೆಗೆ ಬರುವಾಗಲೆ ವಿದ್ಯಾರ್ಥಿಗಳಲ್ಲಿ ತನ್ನ ಜೀವನದ ಮುಂದಿನ ಗುರಿಯ ಬಗ್ಗೆ ಸ್ಪಷ್ಟ ನಿಲುವು ಅಗತ್ಯ. ಆ ಗುರಿಯನ್ನು ತಲಪುವಲ್ಲಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಏಕಾಗ್ರತೆ ಅವಶ್ಯಕ. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳೆಲ್ಲ ಗುಣಮಟ್ಟಕ್ಕೆ ಹೆಸರಾಗಿದೆ. ಇಲ್ಲಿ ಜೀವನ ಶಿಕ್ಷಣ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ಕೊಡಲಾಗುತ್ತದೆ. ಶಿಕ್ಷಣ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗಬಾರದು ಎಂದು
ಹೇಳಿದರು.

ಅತಿಥಿಗಳಾಗಿ ಆಗಮಿಸಿದ ಆಡಳಿತ ಮಂಡಳಿಯ ಮಾನವ ಸಂಪನ್ಮೂಲ ಅಧಿಕಾರಿ ಕೃಷ್ಣ ಮಯ್ಯರವರು ಶುಭಹಾರೈಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ ಮತ್ತು ಶಾಲೆಯ ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಸ್ವಾಗತಿಸಿ , ಶಿಕ್ಷಕಿ ವಾರಿಜ ಎಸ್ ಗೌಡರವರು ವಂದಿಸಿದರು. ಶಿಕ್ಷಕರಾದ ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
error: Content is protected !!