22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ಬಲೂನ್ ಗಳನ್ನು ನೀಡಿ, ಆರತಿ ಬೆಳಗಿ ಶಾಲೆಗೆ ಸ್ವಾಗತಿಸಿದರು. ಸಾಲು ಹಣತೆಗಳನ್ನು ಹಚ್ಚಿ, ಮಗುವಿನ ಜೋಳಿಗೆ ತುಂಬಿಸುವ ಮೂಲಕ ವಿನೂತನವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಉಚಿತ ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ ವಿತರಿಸಲಾಯಿತು. ದಾನಿಗಳಾದ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಪ್ರಾಯೋಜಿತ ಉಚಿತ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು. ತಳಿರು ತೋರಣ, ರಂಗೋಲಿಗಳಿಂದ ಶಾಲೆಯನ್ನು ಅಲಂಕರಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಅಜ್ಜಾಡಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸದಾಶಿವ ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ರಾಘವೇಂದ್ರ ಭಟ್, ಅಧ್ಯಕ್ಷರಾದ ಸಂತೋಷ್ ಮಂಜಿಲ, ಪ್ರದೀಪ್ , ಶಾಲಾ ಮುಖ್ಯ ಶಿಕ್ಷಕರಾದ ಸುಮಿತ್ರಾ ಎಸ್, ಶಿಕ್ಷಕರು, ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!