24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿದ್ದು ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಪರಿಶೀಲಿಸಲು ವಸಂತ ಬಂಗೇರರವರು ಜೂ.2 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು.
ಡಯಾಲಿಸ್ ವಿಭಾಗದಲ್ಲಿ ವೈದ್ಯಾಧಿಕಾರಿಗಳು ಇಲ್ಲದಿದ್ದ ಕಾರಣ ಹಾಗೂ ಆಸ್ಪತ್ರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳು ಬೇಕಾದ ಸೌಲಭ್ಯಗಳು ಇದ್ದರೂ, ಕೆಟ್ಟು ನಿಂತಿದ್ದ ಬಗ್ಗೆ ಡಿ.ಹೆಚ್.ಒ ಗೆ ಕರೆ ಮಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆಯನ್ನು 17 ತಾರೀಕಿನ ಒಳಗೆ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾದ ಔಷಧ ಸಿಗುವುದಿಲ್ಲ, ವೈದ್ಯರು ರೋಗಿಗಳನ್ನು ಸರಿಯಾಗಿ ಪರೀಕ್ಷೆ ಮಾಡುವುದಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬಿ.ಎಂ ಭಟ್, ವಕೀಲ ಮೋಹನ್ ಕುಮಾರ್, ಧರಣೇಂದ್ರ ಕುಮಾರ್ ನಾರಾವಿ, ಜಯವಿಕ್ರಮ್ ಜೊತೆಗೆ ಇದ್ದರು.

Related posts

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!