September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಮಹೇಶ್ ಶೆಟ್ಟಿಯವರು ಹಿಂದೂ ಸಂಘಟನೆಯ ಮುಖೇನಾ ಹಿಂದುಗಳಿಗಾದ ಅನ್ಯಾಯದ ವಿರುದ್ದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಶಶಿರಾಜ್ ಶೆಟ್ಟಿಯವರು ಮಹೇಶ್ ಶೆಟ್ಟಿಯವರ ಬಗ್ಗೆ ಕೇವಲವಾಗಿ ಮಾತನಾಡಿದ್ದನ್ನು ಖಂಡಿಸುತ್ತೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಹೇಳಿದರು.

ಅವರು ಜೂ 2 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಹೇಶ್ ಶೆಟ್ಟಿಯವರು ಕಾಂಗ್ರೇಸ್ ಕಚೇರಿಗೆ ಇಷ್ಟರತನಕ ಕಾಲಿಡಲಿಲ್ಲ, ಸದಸ್ಯತ್ವ ಇಲ್ಲ.ಕಾಂಗ್ರೆಸ್ ಬಾವುಟ ಹಾರಿಸಿಲ್ಲ,ಪ್ರಚಾರ ಸಭೆಯಲ್ಲಿ ಭಾಗವಹಿಸಿಲ್ಲ ಬಹುಶ ಅವರು ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಮಹೇಶ್ ಶೆಟ್ಟಿಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ. ನೀವು ಹೇಗೆ ಅವರನ್ನು ನಕಲಿ ಹಿಂದೂ ಎಂದು ಕರೆತಿರಿ. ನಿಮ್ಮದು ಯಾವ ಹಿಂದುತ್ವ ಎಂದು ಪ್ರಶ್ನಿಸಿದರು.

ಸೌಜನ್ಯಳ ಹೆಸರನ್ನು ರಾಜಕೀಯಕ್ಕೆ ಎಳೆದು ತರಬೇಡಿ, ನಮಗೆ ಇನ್ನೂ ನ್ಯಾಯ ಸಿಗಲಿಲ್ಲ. ಹತ್ತು ವರ್ಷದಿಂದ ಹೋರಾಟ ಮಾಡಿಕೊಂಡು ಬಂದವರು ಮಹೇಶ್ ಶೆಟ್ಟಿ ತಿಮರೋಡಿಯವರು. ನೀವು ನ್ಯಾಯ ತೆಗೆದುಕೊಡಿಸಿ,
ನಿಮ್ಮ ಹಿಂದೆ ನಾವು ಬರುತ್ತೇವೆ ಎಂದು ಸೌಜನ್ಯರವರ ತಾಯಿ ಕುಸುಮಾವತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮನೋಜ್ ಕುಂಜರ್ಪ, ಪ್ರಮುಖರಾದ ಹರೀಶ್ ಕುಮಾರ್ ಬರಮೇಲು, ಸೌಜನ್ಯರವರ ಮಾವ ವಿಠಲ ಗೌಡ ಪಾಂಗಳ, ಪ್ರಜ್ವಲ್ ಕೆ.ವಿ ಗೌಡ, ಜಗದೀಶ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!