26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ, ಎಸ್.ಬಿ.ಐ ಬ್ಯಾಂಕಿನ ಹತ್ತಿರ ಮುಖ್ಯ ರಸ್ತೆ ಮಡಂತ್ಯಾರಿನಲ್ಲಿ ಶುಭಾರಂಭಗೊಂಡಿತು.


ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಕರ್ನಾಟಕ ರಾ.ಸೌ.ಸಂ.ಸ.ನಿ. ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್, ಸೌಹಾರ್ದ ಸಹಕಾರಿಗಳ ಜಿಲ್ಲಾ ಸಂಯೋಜಕರು ವಿಜಯ್, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಎ. ಯನ್ ಕಾಂಪ್ಲೆಕ್ಸ್ ಮಡಂತ್ಯಾರು ಇದರ ಮಾಲಕರಾದ ಶ್ರೀಮತಿ ವಸಂತಿ ಜೆ ಶೆಟ್ಟಿ, ಭಾಗವಹಿಸಿದರು.

ಒಳಾಂಗಣ ವಿನ್ಯಾಸ ಮಾಡಿದ ಶಿವಪ್ರಸಾದ್ ರೈ ಹಾಗೂ ಇಲೆಕ್ಟ್ರಿಕ್ ಕೆಲಸ ಮಾಡಿದ ಜಯಂತ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುಷ್ಮಾ ಪ್ರಾರ್ಥಿಸಿದರು. ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಸ್ವಾಗತಿಸಿದರು, ಶಿವಪ್ರಸಾದ್ ನಿರೂಪಿಸಿದರು. ವ್ಯವಸ್ಥಾಪಕ ಪುರುಷೋತ್ತಮ ನಾಯಕ್ ಎನ್ ಧನ್ಯವಾದವಿತ್ತರು.

Related posts

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!