23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ, ಎಸ್.ಬಿ.ಐ ಬ್ಯಾಂಕಿನ ಹತ್ತಿರ ಮುಖ್ಯ ರಸ್ತೆ ಮಡಂತ್ಯಾರಿನಲ್ಲಿ ಶುಭಾರಂಭಗೊಂಡಿತು.


ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಕರ್ನಾಟಕ ರಾ.ಸೌ.ಸಂ.ಸ.ನಿ. ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್, ಸೌಹಾರ್ದ ಸಹಕಾರಿಗಳ ಜಿಲ್ಲಾ ಸಂಯೋಜಕರು ವಿಜಯ್, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಎ. ಯನ್ ಕಾಂಪ್ಲೆಕ್ಸ್ ಮಡಂತ್ಯಾರು ಇದರ ಮಾಲಕರಾದ ಶ್ರೀಮತಿ ವಸಂತಿ ಜೆ ಶೆಟ್ಟಿ, ಭಾಗವಹಿಸಿದರು.

ಒಳಾಂಗಣ ವಿನ್ಯಾಸ ಮಾಡಿದ ಶಿವಪ್ರಸಾದ್ ರೈ ಹಾಗೂ ಇಲೆಕ್ಟ್ರಿಕ್ ಕೆಲಸ ಮಾಡಿದ ಜಯಂತ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುಷ್ಮಾ ಪ್ರಾರ್ಥಿಸಿದರು. ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಸ್ವಾಗತಿಸಿದರು, ಶಿವಪ್ರಸಾದ್ ನಿರೂಪಿಸಿದರು. ವ್ಯವಸ್ಥಾಪಕ ಪುರುಷೋತ್ತಮ ನಾಯಕ್ ಎನ್ ಧನ್ಯವಾದವಿತ್ತರು.

Related posts

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya
error: Content is protected !!