23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ, ಎಸ್.ಬಿ.ಐ ಬ್ಯಾಂಕಿನ ಹತ್ತಿರ ಮುಖ್ಯ ರಸ್ತೆ ಮಡಂತ್ಯಾರಿನಲ್ಲಿ ಶುಭಾರಂಭಗೊಂಡಿತು.


ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಕರ್ನಾಟಕ ರಾ.ಸೌ.ಸಂ.ಸ.ನಿ. ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್, ಸೌಹಾರ್ದ ಸಹಕಾರಿಗಳ ಜಿಲ್ಲಾ ಸಂಯೋಜಕರು ವಿಜಯ್, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಎ. ಯನ್ ಕಾಂಪ್ಲೆಕ್ಸ್ ಮಡಂತ್ಯಾರು ಇದರ ಮಾಲಕರಾದ ಶ್ರೀಮತಿ ವಸಂತಿ ಜೆ ಶೆಟ್ಟಿ, ಭಾಗವಹಿಸಿದರು.

ಒಳಾಂಗಣ ವಿನ್ಯಾಸ ಮಾಡಿದ ಶಿವಪ್ರಸಾದ್ ರೈ ಹಾಗೂ ಇಲೆಕ್ಟ್ರಿಕ್ ಕೆಲಸ ಮಾಡಿದ ಜಯಂತ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುಷ್ಮಾ ಪ್ರಾರ್ಥಿಸಿದರು. ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಸ್ವಾಗತಿಸಿದರು, ಶಿವಪ್ರಸಾದ್ ನಿರೂಪಿಸಿದರು. ವ್ಯವಸ್ಥಾಪಕ ಪುರುಷೋತ್ತಮ ನಾಯಕ್ ಎನ್ ಧನ್ಯವಾದವಿತ್ತರು.

Related posts

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
error: Content is protected !!