22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ, ಎಸ್.ಬಿ.ಐ ಬ್ಯಾಂಕಿನ ಹತ್ತಿರ ಮುಖ್ಯ ರಸ್ತೆ ಮಡಂತ್ಯಾರಿನಲ್ಲಿ ಶುಭಾರಂಭಗೊಂಡಿತು.


ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಕರ್ನಾಟಕ ರಾ.ಸೌ.ಸಂ.ಸ.ನಿ. ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್, ಸೌಹಾರ್ದ ಸಹಕಾರಿಗಳ ಜಿಲ್ಲಾ ಸಂಯೋಜಕರು ವಿಜಯ್, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಎ. ಯನ್ ಕಾಂಪ್ಲೆಕ್ಸ್ ಮಡಂತ್ಯಾರು ಇದರ ಮಾಲಕರಾದ ಶ್ರೀಮತಿ ವಸಂತಿ ಜೆ ಶೆಟ್ಟಿ, ಭಾಗವಹಿಸಿದರು.

ಒಳಾಂಗಣ ವಿನ್ಯಾಸ ಮಾಡಿದ ಶಿವಪ್ರಸಾದ್ ರೈ ಹಾಗೂ ಇಲೆಕ್ಟ್ರಿಕ್ ಕೆಲಸ ಮಾಡಿದ ಜಯಂತ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುಷ್ಮಾ ಪ್ರಾರ್ಥಿಸಿದರು. ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಸ್ವಾಗತಿಸಿದರು, ಶಿವಪ್ರಸಾದ್ ನಿರೂಪಿಸಿದರು. ವ್ಯವಸ್ಥಾಪಕ ಪುರುಷೋತ್ತಮ ನಾಯಕ್ ಎನ್ ಧನ್ಯವಾದವಿತ್ತರು.

Related posts

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya
error: Content is protected !!