September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ, ಎಸ್.ಬಿ.ಐ ಬ್ಯಾಂಕಿನ ಹತ್ತಿರ ಮುಖ್ಯ ರಸ್ತೆ ಮಡಂತ್ಯಾರಿನಲ್ಲಿ ಶುಭಾರಂಭಗೊಂಡಿತು.


ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಸುಸ್ಸಾನ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಕರ್ನಾಟಕ ರಾ.ಸೌ.ಸಂ.ಸ.ನಿ. ಬೆಂಗಳೂರು ಇದರ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ ಭಟ್, ಸೌಹಾರ್ದ ಸಹಕಾರಿಗಳ ಜಿಲ್ಲಾ ಸಂಯೋಜಕರು ವಿಜಯ್, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಎ. ಯನ್ ಕಾಂಪ್ಲೆಕ್ಸ್ ಮಡಂತ್ಯಾರು ಇದರ ಮಾಲಕರಾದ ಶ್ರೀಮತಿ ವಸಂತಿ ಜೆ ಶೆಟ್ಟಿ, ಭಾಗವಹಿಸಿದರು.

ಒಳಾಂಗಣ ವಿನ್ಯಾಸ ಮಾಡಿದ ಶಿವಪ್ರಸಾದ್ ರೈ ಹಾಗೂ ಇಲೆಕ್ಟ್ರಿಕ್ ಕೆಲಸ ಮಾಡಿದ ಜಯಂತ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುಷ್ಮಾ ಪ್ರಾರ್ಥಿಸಿದರು. ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಸ್ವಾಗತಿಸಿದರು, ಶಿವಪ್ರಸಾದ್ ನಿರೂಪಿಸಿದರು. ವ್ಯವಸ್ಥಾಪಕ ಪುರುಷೋತ್ತಮ ನಾಯಕ್ ಎನ್ ಧನ್ಯವಾದವಿತ್ತರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
error: Content is protected !!