ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು ಈ ಪ್ರದರ್ಶನವನ್ನು ನೋಡಲು 200 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಲ್ಮಂಜ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರು ರವಿ ಪ್ರಸಾದ್ ಕಲ್ಮಂಜ ಮಾತನಾಡಿದರು.
ಈ ಸಂದರ್ಭದಲ್ಲಿ ಜಗದೀಶ್, ಯತೀಶ್ ಮೇಘರಾಜ್, ಸುದೀಪ್ ,ಹಿರಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು ಸುವಿತ್ ತಾಲೂಕು ಸಂಚಾಲಕರು ಎಬಿವಿಪಿ , ಮೋಕ್ಷಿತ್ ಸಹ ಸಂಚಾಲಕರು ಹಾಗೂ ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Comment

error: Content is protected !!