ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Leave a Comment

error: Content is protected !!