ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ‌ ನೀಡಿರುವ ದೂರಿನಂತೆ ಮೂರು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತೆಕ್ಕಾರು ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮತ್ತು ಪಿಡಿಒ ಸುಮಯ್ಯಾ ಅವರು ನೀಡಿದ ದೂರಿನಂತೆ ಗ್ರಾ.ಪಂ ಸದಸ್ಯೆ ಯಮುನಾ, ಅವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ದೂರಿನ ಸಾರಾಂಶವೇನೆಂದರೆ, ಗ್ರಾ.ಪಂ ವಿವಾದಿತ ಕಟ್ಟಡದಲ್ಲಿ ಯಮುನಾ ಅವರು ನೆಲೆಸಿರುವ ಬಗ್ಗೆ ಈಗಾಗಲೇ ವ್ಯಾಜ್ಯ ಇದೆ. ಈ ಕಟ್ಟಡದಲ್ಲಿ ಶಾಸಕರು ಎರಡನೇ ಬಾರಿಗೆ ಚುನಾಯಿತರಾಗಿರುವ ಬಗ್ಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ್ದು, ಅದನ್ನು ತೆರವುಗೊಳಿಸುವಂತೆ ಗ್ರಾ.ಪಂ ವತಿಯಿಂದ ಸಿಬ್ಬಂದಿ ಪ್ರಮೀಳಾ ಅವರು ಯಮುನಾ ಅವರಿಗೆ ನೋಟೀಸು ಜಾರಿಗೊಳಿಸಿ ಸ್ವೀಕೃತಿ ಪಡೆದು ಪಂಚಾಯತ್ ಗೆ ಮರಳಿದ್ದರು. ಇದಾದ ಸ್ವಲ್ಪದರಲ್ಲೇ ಯಮುನಾ ಮತ್ತು ಅವರ ಪುತ್ರ ನವೀನ್ ನಾಯ್ಕ ಅವರು ಪಂಚಾಯತ್ ಗೆ ಬಂದು ಸ್ವೀಕೃತಿ ಪತ್ರ ಮರಳಿ ನೀಡುವಂತೆ ಒತ್ತಾಯಿಸಿ ಗಲಾಟೆ ಮಾಡಿ,. ಸಿಬ್ಬಂದಿ ಮೇಲೆ ಮತ್ತು,‌ಪಿಡಿಒ‌ ಮೇಲೂ ಹಲ್ಲೆ ನಡೆಸಿದರೆಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. . ಅಲ್ಲದೆ ಗ್ರಾ.ಪಂ ಸರಕಾರಿ ಸೊತ್ತಾಗಿರುವ ಮೊಬೈಲ್ ಫೋನ್ ಅನ್ನು ಪಿಡಿಒ‌ ಅವರಿಂದ ಕಿತ್ತುಕೊಂಡು ನೆಲಕ್ಕೆ ಅಪ್ಪಳಿಸಿ ಹಾನಿ ಮಾಡಿರುತ್ತಾರೆ. ಪಂಚಾಯತ್ ನಲ್ಲಿದ್ದ ಸರಕಾರಿ ಹಣ ರೂ.3 ಸಾವಿರ ತೆಗೆದು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಂಚಾಯತ್ ಎಡೆಂಡರ್ ಅವರ ಹುದ್ದೆ ಖಾಲಿ ಇರೂದರಿಂದ ಪಿಡಿಒ ನಿರ್ದೇಶನದ ಮೇರೆಗೆ ಸ್ವಚ್ಚತಾಗಾರ್ತಿ ಪ್ರಮೀಳಾ ನೋಟೀಸು ನೀಡುವ ಕರ್ತವ್ಯ ಮಾಡಿ ಬಂದಿದ್ದರು. ಅವರ ಮೇಲೆ ಆಗಿರುವ ಹಲ್ಲೆ, ಜೀವ ಬೆದರಿಕೆ ಬಗ್ಗೆ ಪಿಡಿಒ‌ ಅವರಿಗೆ ಅವರು ಸಲ್ಲಿಸಿರುವ ದೂರಿನ‌ ಉಲ್ಲೇಖದಂತೆ ಪಂಚಾಯತ್ ಕಚೇರಿಯಲ್ಲಿ ನಡೆದಿರುವ ಅಪರಾಧ ಕೃತ್ಯದ ಬಗ್ಗೆ ಪಿಡಿಒ ಸುಮಯ್ಯಾ ಅವರು ಠಾಣೆಗೆ ದೂರು ದಾಖಲಿಸಿದ್ದಾರೆ. ಅದರಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರು ಐಪಿಸಿ ಸೆಕ್ಷನ್ 109, 504, 323, 506, 354, 353, 392, 34, 2(A) ಮೊದಲಾದ ದಂಡ ಸಂಹಿತೆಯಂತೆ ಕೇಸು ದಾಖಲಾಗಿದೆ.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!