ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Leave a Comment

error: Content is protected !!