April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಬೇಬಿ ರವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಪಡ0ಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರಿಯರವರು ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಬಿಪಿ ಹಾಗೂ ಶುಗರ್ ಬರಲು ಕಾರಣ ಹಾಗೂ ಪರಿಹಾರದ ಬಗ್ಗೆ, ಹಾಗೂ ಇನ್ನು ಮುಂದಕ್ಕೆ ಮಳೆಗಾಲ ಪ್ರಾರಂಭ ವಾಗುದರಿಂದ ಸುತ್ತಮುತ್ತಲಿನ ವಾತಾವರಣ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರ ಬಗ್ಗೆ, ನೀರು ನಿಲ್ಲದಂತೆ ನೋಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ತಪಾಸಣೆಗೆ ಆಶಾ ಕಾರ್ಯಕರ್ತರಾದ ಶ್ರೀಮತಿ ಜ್ಯೋತಿ, ಹಾಗೂ ಪ್ರೇಮ ಸಹಕರಿಸಿದರು. ಈ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹರಿಣಿ. ಎಂ , ಪನಕಜೆ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪವತಿ ಯವರು ಉಪಸ್ಥಿತರಿದ್ದರು

Related posts

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!