26.7 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಬೇಬಿ ರವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಪಡ0ಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರಿಯರವರು ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಬಿಪಿ ಹಾಗೂ ಶುಗರ್ ಬರಲು ಕಾರಣ ಹಾಗೂ ಪರಿಹಾರದ ಬಗ್ಗೆ, ಹಾಗೂ ಇನ್ನು ಮುಂದಕ್ಕೆ ಮಳೆಗಾಲ ಪ್ರಾರಂಭ ವಾಗುದರಿಂದ ಸುತ್ತಮುತ್ತಲಿನ ವಾತಾವರಣ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರ ಬಗ್ಗೆ, ನೀರು ನಿಲ್ಲದಂತೆ ನೋಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ತಪಾಸಣೆಗೆ ಆಶಾ ಕಾರ್ಯಕರ್ತರಾದ ಶ್ರೀಮತಿ ಜ್ಯೋತಿ, ಹಾಗೂ ಪ್ರೇಮ ಸಹಕರಿಸಿದರು. ಈ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹರಿಣಿ. ಎಂ , ಪನಕಜೆ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪವತಿ ಯವರು ಉಪಸ್ಥಿತರಿದ್ದರು

Related posts

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!