ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
error: Content is protected !!