22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. 5 ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯ ಇಲ್ಲಿನ ಪಾಲಕರಾದ ಯತೀಶ್ ಕೆ ಬಳ೦ಜ ಅವರು ಮಾತನಾಡಿ ಸಾವಯವ ಕೃಷಿಯ ಮಹತ್ವ ದ ಬಗ್ಗೆ ಅರಿವು ಮೂಡಿಸಿದರು , ಅಮೃತ ಜಲ ಮತ್ತು, ಎರೆಹುಳ ಗೊಬ್ಬರ ತಯಾರಿಕೆ ಬಗ್ಗೆ ಮಾಹಿತಿ ನೀಡಿದರು ಹಾಗೂ ನೈತಿಕ ಶಿಕ್ಷಣ ಮತ್ತು ಜೀವನ ಶಿಕ್ಷಣದ ಮಹತ್ವದ ಕುರಿತು ಮನವರಿಕೆ ಮಾಡಿದರು.

ಶಾಲಾ ಮುಖ್ಯ ಶಿಕ್ಷಕರು ಬಾಲಕೃಷ್ಣ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಕರಕುಶಲದಿಂದ ರಚಿತವಾದ ಪರಿಸರ ಸಂರಕ್ಷಣಾ ವಿಷಯದ ಕುರಿತ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸುವುದರ ಮೂಲಕ ಉದ್ಘಾಟನೆಗೊಂಡಿತು. ನಂತರ ಮಾತನಾಡಿ ಪರಿಸರ ಮನುಷ್ಯನಿಗೆ ಜೀವ ರಕ್ಷಕ ಕವಚದಂತೆ ಕೆಲಸ ಮಾಡುತ್ತದೆ. ತುಳಸಿಯಂತಹ ಗಿಡಗಳು ಮನುಷ್ಯನಿಗೆ ಪ್ರಾಣ ವಾಯುವನ್ನು ಒದಗಿಸುತ್ತದೆ ಹೀಗಾಗಿ ಪರಿಸರ ರಕ್ಷಣೆ ಅತ್ಯಗತ್ಯ ಎಂದರು.

ವಿದ್ಯಾರ್ಥಿನಿಯರು ಪ್ರಾರ್ಥನೆಗೆ ಗೈದರು. ಶಾಲಾ ಸಹ ಶಿಕ್ಷಕ ಕೂಸಪ್ಪಗೌಡ ಅವರು ಪರಿಸರ ದಿನಾಚರಣೆಯ ಹಿನ್ನೆಲೆ, ಅಗತ್ಯತೆ, ಆರಂಭ, ಇತ್ಯಾದಿಗಳನ್ನು ತಿಳಿಸುವುದರ ಜೊತೆಗೆ ಮಕ್ಕಳಿಗೆ ಪರಿಸರವನ್ನು ಸಂರಕ್ಷಿಸುವ ಅನಿವಾರ್ಯತೆಯ ಕುರಿತು ಮನದಟ್ಟು ಮಾಡಿದರು.

ನಂತರ ಮಕ್ಕಳಿಗೆ ಸಹ ಶಿಕ್ಷಕಿ ಅನಷಾ ಇವರು ಪರಿಸರದ ಕುರಿತ ರಸಪ್ರಶ್ನ ಕಾರ್ಯಕ್ರಮ ನೆರವೇರಿಸಿದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಹ ಶಿಕ್ಷಕಿ ಕಾವ್ಯ ಕಾರ್ಯಕ್ರಮದ ನಿರೂಪಣೆಗೈದರು. ಸಹ ಶಿಕ್ಷಕಿ ಅಶ್ವಿನಿ ಸ್ವಾಗತಿಸಿದರು. ಸಹ ಶಿಕ್ಷಕ ವಿರಾಜ್ ಧನ್ಯವಾದವಿತ್ತರು .

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya
error: Content is protected !!