27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

ಉಜಿರೆ: ಮುಂಗಾರು ಪೂರ್ವ ಸಿದ್ಧತೆ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ಜೂ 4 ರಂದು   ತಾಲೂಕಿನ  ಹಲವು ಕಡೆ ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿರುವ ಕಸಕಡ್ಡಿಗಳ  ಸ್ವಚ್ಛತಾ  ಕಾರ್ಯಕ್ರಮ ನಡೆಯಿತು.
ಮಳೆಗಾಲದಲ್ಲಿ ನದಿ, ಹೊಳೆ, ಹಳ್ಳಗಳು ತುಂಬಿ ಹರಿಯುವ ಸಮಯ ಕೃಷಿ ನೀರಿನ ಉದ್ದೇಶಕ್ಕಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳಲ್ಲಿ ಪ್ರವಾಹದೊಂದಿಗೆ  ತೇಲಿ ಬರುವ ಮರಮಟ್ಟು, ತ್ಯಾಜ್ಯಗಳು ಸಿಲುಕಿ ಅನೇಕ ಅನಾಹುತಗಳಿಗೆ ಕಾರಣವಾಗುತ್ತಿವೆ.
ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟು,ತ್ಯಾಜ್ಯ ತಡೆಯೊಡ್ಡುವುದರಿಂದ  ಕೃತಕ ನೆರೆ, ಸಮೀಪದ ತೋಟಗಳು, ತ್ಯಾಜ್ಯಮಯವಾಗುವುದು ನದಿ ನೀರು ಸರಾಗವಾಗಿ ಹರಿಯದೆ ತೋಟಗಳಿಗೆ ನುಗ್ಗಿ  ಅಪಾರ ಹಾನಿಯಾಗುತ್ತಿವೆ. ಬೃಹತ್ ಗಾತ್ರದ ಮರಗಳು ಕಿಂಡಿ ಅಣೆಕಟ್ಟುಗಳಿಗೆ ಬಡಿದು ಅಣೆಕಟ್ಟಿಗೆ ಹಾನಿ ಉಂಟಾಗುತ್ತದೆ. ಮರಮಟ್ಟು ಸಿಲುಕಿ ನೀರು ಸರಾಗವಾಗಿ ಹರಿಯದೆ ಕಿಂಡಿ ಅಣೆಕಟ್ಟು ಹಾಗೂ ನದಿ ಪ್ರದೇಶದಲ್ಲಿ ಸಾಕಷ್ಟು ಹೂಳು ತುಂಬುತ್ತದೆ. ನದಿಗಳಲ್ಲಿ ಹೂಳು ತುಂಬಿದರೆ ಅಂತರ್ಜಲ ಮಟ್ಟ ಕುಸಿತಗೊಂಡು ನೀರು ಕೂಡ ಬಹುಬೇಗ ಬತ್ತಿ ಹೋಗುತ್ತದೆ.  ನದಿಗಳ ಪ್ರದೇಶದಲ್ಲಿ ಕಸಕಡ್ಡಿ ತ್ಯಾಜ್ಯಗಳು ತುಂಬಿದರೆ ಅವು ಬೇಸಿಗೆಯಲ್ಲಿ ಕಿಂಡಿ ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವಾ ಗ ತೊಂದರೆ ಉಂಟಾಗುವುದರೊಂದಿಗೆ ನೀರು ಹರಿಯುವ ಕಾಲುವೆಗಳಿಗೂ ತುಂಬಿ ತೋಟಗಳಿಗೆ ಹರಿದು ಬರುತ್ತವೆ.
ಕಳೆದ ನಾಲ್ಕು ವರ್ಷಗಳಿಂದ ನದಿ ಪ್ರದೇಶಗಳಲ್ಲಿ ಕಿಂಡಿ ಅಣೆಕಟ್ಟುಗಳ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಹೂಳು ತುಂಬಿದ ಕಾರಣ ಈ ಬಾರಿ ನೇತ್ರಾವತಿ ಸೇರಿದಂತೆ ಹಲವು ನದಿಗಳು ಮಾರ್ಚ್ ಮಧ್ಯ ಭಾಗದಲ್ಲಿ ಬತ್ತಿ ಜನರು ತೀವ್ರ  ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಶಾಸಕರ ಸೂಚನೆ:
ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ  ಮುಂಗಾರುಪೂರ್ವ ಸಿದ್ಧತೆ ಸಭೆ ನಡೆದಿದ್ದು ಶಾಸಕರು ಪಂಚಾಯತಿ ಅಧ್ಯಕ್ಷರು ಹಾಗೂ ಪಿಡಿಒಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ಕಿಂಡಿ ಅಣೆಕಟ್ಟುಗಳ ಪ್ರದೇಶದಲ್ಲಿ ಭಾನುವಾರದಂದು ಸಂಘ, ಸಂಸ್ಥೆಗಳ ಸಹಕಾರದಲ್ಲಿ ಮರಮಟ್ಟು,ತ್ಯಾಜ್ಯ ತೆರವುಗೊಳಿಸಿ ನದಿ ಪ್ರದೇಶವನ್ನು ಸ್ವಚ್ಛ ಮಾಡಿ ನೀರಿನ ಸುಗಮ ಸಂಚಾರಕ್ಕೆ ಅನುಕೂಲತೆ  ಕಲ್ಪಿಸಲು  ಸೂಚಿಸಿದ್ದರು. ಮುಂಗಾರು ಪೂರ್ವದಲ್ಲಿ ಇಂತಹ ಮುನ್ನೆಚ್ಚರಿಕೆ ಕ್ರಮ  ಕೈಗೊಂಡರೆ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರವಾಹ  ಅವಘಡಕ್ಕೆ ಕಡಿವಾಣ ಹಾಕಲು ಸಾಧ್ಯವಿರುವ ಕಾರಣ ಇದು ಉತ್ತಮ ಸೂಚನೆಯಾಗಿದೆ.
ಕಿಂಡಿ ಅಣೆಕಟ್ಟುಗಳ ಸ್ವಚ್ಛತೆ:
ಶಾಸಕರ ಸೂಚನೆಯಂತೆ  ಜೂ 4 ರಂದು ಮುಂಡಾಜೆಯ ಕಡಂಬಳ್ಳಿ,ಕಾಪು ಕಿಂಡಿ ಅಣೆಕಟ್ಟುಗಳ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಮುಂಡಾಜೆ ಗ್ರಾಮ ಪಂಚಾಯಿತಿ, ಮುಂಡಾಜೆ ಪದವಿ ಪೂರ್ವ ವಿದ್ಯಾಲಯದ ಎನ್ನೆಸ್ಸೆಸ್ ವಿದ್ಯಾರ್ಥಿಗಳು, ರೋಟರಿ ಸಮುದಾಯದಳ, ಮುಂಡಾಜೆ ಯುವಕ ಮಂಡಲ, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್, ವಿವೇಕಾನಂದ ಗ್ರಾಮ ವಿಕಾಸ ಸಮಿತಿ,ಮತ್ತಿತರ ಸಂಘ ಸಂಸ್ಥೆಗಳ ಸದಸ್ಯರು  ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಜಿಪಂ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ್, ಗ್ರಾಪಂ.ಅದ್ಯಕ್ಷೆ ರಂಜಿನಿ, ಸದಸ್ಯರಾದ ರಾಮಣ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಗಣೇಶ ಬಂಗೇರ, ರವಿಚಂದ್ರ, ಸಿಬ್ಬಂದಿ ವರ್ಗ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾದ ಬಾಬು ಪೂಜಾರಿ, ಶೀನಪ್ಪ ಗೌಡ , ಪುರುಷೋತ್ತಮಶೆಟ್ಟಿ, ನಮಿತಾ, ಕಿಂಡಿ ಅಣೆಕಟ್ಟು ಸಮಿತಿ ಅಧ್ಯಕ್ಷ ವಿದ್ಯಾಧರ ಮರಾಠೆ, ಕಾರ್ಯದರ್ಶಿ ಶಶಾಂಕ್ ಮರಾಠೆ ಹಾಗೂ ಸ್ಥಳೀಯರು  ಭಾಗವಹಿಸಿದ್ದರು. 

Related posts

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!