22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು 50 ಬೀಜದ ಉಂಡೆ ಯನ್ನು ತಯಾರಿಸಿದರು. ಕಾಡು ಉಳಿಸಿ ನಾಡು ಬೆಳೆಸಿ ಎಂಬ ಘೋಷಣೆಗಳೊಂದಿಗೆ ಜಾಥದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಟೀಮ್ ಲೀಡರ್ ಗೈಡ್ ವಿದ್ಯಾರ್ಥಿ ಕುಮಾರಿ ಸಿಂಚನ , ಹಾಗೂ ಸ್ಕೌಟ್ ಟೀಮ್ ಲೀಡರ್ ಮಾಸ್ಟರ್ ಜೈದೀಪ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಸ್ಕೌಟ್ಸ್ ಗೈಡ್ ನ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!