25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya
error: Content is protected !!