September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!