24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಜೂ 4ರಂದು ಸೋಮನಾಥೇಶ್ವರಿ ಭಜನಾ ಮಂಡಳಿಯ ಆವರಣದಲ್ಲಿ ನಡೆಯಿತು
ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ದಯಾನಂದ ಹಾಗೂ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಉಪಸ್ಥಿತರಿದ್ದರು.

ಗುರುವಾಯನಕೆರೆ ಶೌರ್ಯ ಸಮಿತಿಯ ಕ್ಯಾಪ್ಟನ್ ಸತೀಶ್ ಆಚಾರ್ಯ ಸಭೆಯಲ್ಲಿ ಭಾಗವಹಿಸಿ ಘಟಕಕ್ಕೆ ಶುಭ ಹಾರೈಸಿದರು. ಯೋಜನಾಧಿಕಾರಿಯವರು ಹತ್ತು ಹಲವು ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಗಿಡ ನಾಟಿ ಕಾರ್ಯಕ್ರಮ ಆರೋಗ್ಯ ತಪಾಸಣಾ ಶಿಬಿರ ಅಗ್ನಿಶಾಮಕದವರಿಂದ ತರಬೇತಿ ನೀಡುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ತುರ್ತು ಸಂದರ್ಭ ಹೊರತುಪಡಿಸಿ ಇತರ ಸಂದರ್ಭಗಳಲ್ಲಿ ಸಂಘ ಸಂಸ್ಥೆಗಳ ಜೊತೆ ಸಹಕರಿಸುವಂತೆ ಆಯಾ ಸಂಘ ಸಂಸ್ಥೆಗಳ ಮನವಿಯನ್ನು ಪರಿಗಣಿಸಿ ಸ್ಪಂದಿಸುವುದನ್ನು ತೀರ್ಮಾನಿಸಲಾಯಿತು. ವಿವಿಧ ವಿಷಯಗಳ ಬಗ್ಗೆ ಆರೋಗ್ಯಕರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಂಯೋಜಕರಾದ ಶ್ರೀಕಾಂತ್, ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿಗಳಾದ ರಾಜೇಶ್, ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ನಾರಾಯಣ ಸಾಲಿಯಾನ್, ಶಿವಾನಂದ ಪ್ರಕಾಶ್ ಕೊಲ್ಲಂಗೆ, ಶುಭಕರ ಪೂಜಾರಿ, ರವಿ ಪೂಜಾರಿ, ಜಯಕುಮಾರ್, ರವಿಚಂದ್ರ, ಅಶೋಕ್ ಪಿ, ಯಶೋದರ ಸುವರ್ಣ, ಆಶಾ, ನಳಿನಿ, ಹೇಮಾವತಿ, ಅಮಿತಾ, ರೂಪಶ್ರೀ, ಸರಸ್ವತಿ, ಹರ್ಷಲಾ, ಸೋಮನಾಥ ಶಿರ್ಲಾಲು, ದಿನೇಶ್ ಬಿ, ಜಗದೀಶ್, ಪ್ರವೀಣ್, ಉಪಸ್ಥಿತರಿದ್ದರು.
ಸಂಯೋಜಕ ಶ್ರೀಕಾಂತ್ ಸ್ವಾಗತಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ವರದಿಯನ್ನು ಓದಿದರು. ಸ್ವಯಂಸೇವಕ ಅಶೋಕ್ ವಂದಿಸಿದರು.

Related posts

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
error: Content is protected !!