25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಜೂ 4ರಂದು ಸೋಮನಾಥೇಶ್ವರಿ ಭಜನಾ ಮಂಡಳಿಯ ಆವರಣದಲ್ಲಿ ನಡೆಯಿತು
ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ದಯಾನಂದ ಹಾಗೂ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಉಪಸ್ಥಿತರಿದ್ದರು.

ಗುರುವಾಯನಕೆರೆ ಶೌರ್ಯ ಸಮಿತಿಯ ಕ್ಯಾಪ್ಟನ್ ಸತೀಶ್ ಆಚಾರ್ಯ ಸಭೆಯಲ್ಲಿ ಭಾಗವಹಿಸಿ ಘಟಕಕ್ಕೆ ಶುಭ ಹಾರೈಸಿದರು. ಯೋಜನಾಧಿಕಾರಿಯವರು ಹತ್ತು ಹಲವು ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಗಿಡ ನಾಟಿ ಕಾರ್ಯಕ್ರಮ ಆರೋಗ್ಯ ತಪಾಸಣಾ ಶಿಬಿರ ಅಗ್ನಿಶಾಮಕದವರಿಂದ ತರಬೇತಿ ನೀಡುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ತುರ್ತು ಸಂದರ್ಭ ಹೊರತುಪಡಿಸಿ ಇತರ ಸಂದರ್ಭಗಳಲ್ಲಿ ಸಂಘ ಸಂಸ್ಥೆಗಳ ಜೊತೆ ಸಹಕರಿಸುವಂತೆ ಆಯಾ ಸಂಘ ಸಂಸ್ಥೆಗಳ ಮನವಿಯನ್ನು ಪರಿಗಣಿಸಿ ಸ್ಪಂದಿಸುವುದನ್ನು ತೀರ್ಮಾನಿಸಲಾಯಿತು. ವಿವಿಧ ವಿಷಯಗಳ ಬಗ್ಗೆ ಆರೋಗ್ಯಕರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಂಯೋಜಕರಾದ ಶ್ರೀಕಾಂತ್, ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿಗಳಾದ ರಾಜೇಶ್, ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ನಾರಾಯಣ ಸಾಲಿಯಾನ್, ಶಿವಾನಂದ ಪ್ರಕಾಶ್ ಕೊಲ್ಲಂಗೆ, ಶುಭಕರ ಪೂಜಾರಿ, ರವಿ ಪೂಜಾರಿ, ಜಯಕುಮಾರ್, ರವಿಚಂದ್ರ, ಅಶೋಕ್ ಪಿ, ಯಶೋದರ ಸುವರ್ಣ, ಆಶಾ, ನಳಿನಿ, ಹೇಮಾವತಿ, ಅಮಿತಾ, ರೂಪಶ್ರೀ, ಸರಸ್ವತಿ, ಹರ್ಷಲಾ, ಸೋಮನಾಥ ಶಿರ್ಲಾಲು, ದಿನೇಶ್ ಬಿ, ಜಗದೀಶ್, ಪ್ರವೀಣ್, ಉಪಸ್ಥಿತರಿದ್ದರು.
ಸಂಯೋಜಕ ಶ್ರೀಕಾಂತ್ ಸ್ವಾಗತಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ವರದಿಯನ್ನು ಓದಿದರು. ಸ್ವಯಂಸೇವಕ ಅಶೋಕ್ ವಂದಿಸಿದರು.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!