September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಜೂ 4ರಂದು ಸೋಮನಾಥೇಶ್ವರಿ ಭಜನಾ ಮಂಡಳಿಯ ಆವರಣದಲ್ಲಿ ನಡೆಯಿತು
ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ದಯಾನಂದ ಹಾಗೂ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಉಪಸ್ಥಿತರಿದ್ದರು.

ಗುರುವಾಯನಕೆರೆ ಶೌರ್ಯ ಸಮಿತಿಯ ಕ್ಯಾಪ್ಟನ್ ಸತೀಶ್ ಆಚಾರ್ಯ ಸಭೆಯಲ್ಲಿ ಭಾಗವಹಿಸಿ ಘಟಕಕ್ಕೆ ಶುಭ ಹಾರೈಸಿದರು. ಯೋಜನಾಧಿಕಾರಿಯವರು ಹತ್ತು ಹಲವು ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಗಿಡ ನಾಟಿ ಕಾರ್ಯಕ್ರಮ ಆರೋಗ್ಯ ತಪಾಸಣಾ ಶಿಬಿರ ಅಗ್ನಿಶಾಮಕದವರಿಂದ ತರಬೇತಿ ನೀಡುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ತುರ್ತು ಸಂದರ್ಭ ಹೊರತುಪಡಿಸಿ ಇತರ ಸಂದರ್ಭಗಳಲ್ಲಿ ಸಂಘ ಸಂಸ್ಥೆಗಳ ಜೊತೆ ಸಹಕರಿಸುವಂತೆ ಆಯಾ ಸಂಘ ಸಂಸ್ಥೆಗಳ ಮನವಿಯನ್ನು ಪರಿಗಣಿಸಿ ಸ್ಪಂದಿಸುವುದನ್ನು ತೀರ್ಮಾನಿಸಲಾಯಿತು. ವಿವಿಧ ವಿಷಯಗಳ ಬಗ್ಗೆ ಆರೋಗ್ಯಕರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಂಯೋಜಕರಾದ ಶ್ರೀಕಾಂತ್, ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿಗಳಾದ ರಾಜೇಶ್, ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ನಾರಾಯಣ ಸಾಲಿಯಾನ್, ಶಿವಾನಂದ ಪ್ರಕಾಶ್ ಕೊಲ್ಲಂಗೆ, ಶುಭಕರ ಪೂಜಾರಿ, ರವಿ ಪೂಜಾರಿ, ಜಯಕುಮಾರ್, ರವಿಚಂದ್ರ, ಅಶೋಕ್ ಪಿ, ಯಶೋದರ ಸುವರ್ಣ, ಆಶಾ, ನಳಿನಿ, ಹೇಮಾವತಿ, ಅಮಿತಾ, ರೂಪಶ್ರೀ, ಸರಸ್ವತಿ, ಹರ್ಷಲಾ, ಸೋಮನಾಥ ಶಿರ್ಲಾಲು, ದಿನೇಶ್ ಬಿ, ಜಗದೀಶ್, ಪ್ರವೀಣ್, ಉಪಸ್ಥಿತರಿದ್ದರು.
ಸಂಯೋಜಕ ಶ್ರೀಕಾಂತ್ ಸ್ವಾಗತಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ವರದಿಯನ್ನು ಓದಿದರು. ಸ್ವಯಂಸೇವಕ ಅಶೋಕ್ ವಂದಿಸಿದರು.

Related posts

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!