37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು.

ಸುಮಾರು 47 ವಿದ್ಯಾರ್ಥಿಗಳಿಗೆ 55,000 ಸಾವಿರ ಮೊತ್ತದ ಪುಸ್ತಕ, ಬ್ಯಾಗ್, ಪೆನ್ನು,ಪೆನ್ಸಿಲ್ ಇತ್ಯಾದಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ನಾಯ್ಕ್ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಸುಬ್ರಮಣ್ಯ ಭಟ್ ಹಲೇಜಿ ಗುತ್ತಿಗೆದಾರರು ಮೆಸ್ಕಾಂ, ಸಂದೀಪ್ ಕುಪ್ಪೆಟ್ಟಿ ಅಧ್ಯಕ್ಷರು ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ರಂಜಿತ್ ದರ್ಮಾಡಿ ಅವರು ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಸಂಪೂರ್ಣ ಖರ್ಚು- ವೆಚ್ಚವನ್ನು ಊರಿನ ಗಣ್ಯರಾದ ಅತುಲ್ ಕುಮಾರ್ ಹಲೇಜಿ ಮತ್ತು ಸುಧೀರ್ ಕುಮಾರ್ ಹಲೇಜಿ ಅವರು ನೀಡಿದರು.

ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ರೋಹಿತ್ ಶೆಟ್ಟಿ ಸ್ವಾಗತಿಸಿದರು, ಪ್ರವೀಣ್ ರೈ ವಂದಿಸಿದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!