23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು.

ಸುಮಾರು 47 ವಿದ್ಯಾರ್ಥಿಗಳಿಗೆ 55,000 ಸಾವಿರ ಮೊತ್ತದ ಪುಸ್ತಕ, ಬ್ಯಾಗ್, ಪೆನ್ನು,ಪೆನ್ಸಿಲ್ ಇತ್ಯಾದಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ನಾಯ್ಕ್ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಸುಬ್ರಮಣ್ಯ ಭಟ್ ಹಲೇಜಿ ಗುತ್ತಿಗೆದಾರರು ಮೆಸ್ಕಾಂ, ಸಂದೀಪ್ ಕುಪ್ಪೆಟ್ಟಿ ಅಧ್ಯಕ್ಷರು ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ರಂಜಿತ್ ದರ್ಮಾಡಿ ಅವರು ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಸಂಪೂರ್ಣ ಖರ್ಚು- ವೆಚ್ಚವನ್ನು ಊರಿನ ಗಣ್ಯರಾದ ಅತುಲ್ ಕುಮಾರ್ ಹಲೇಜಿ ಮತ್ತು ಸುಧೀರ್ ಕುಮಾರ್ ಹಲೇಜಿ ಅವರು ನೀಡಿದರು.

ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ರೋಹಿತ್ ಶೆಟ್ಟಿ ಸ್ವಾಗತಿಸಿದರು, ಪ್ರವೀಣ್ ರೈ ವಂದಿಸಿದರು.

Related posts

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!