22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು.

ಸುಮಾರು 47 ವಿದ್ಯಾರ್ಥಿಗಳಿಗೆ 55,000 ಸಾವಿರ ಮೊತ್ತದ ಪುಸ್ತಕ, ಬ್ಯಾಗ್, ಪೆನ್ನು,ಪೆನ್ಸಿಲ್ ಇತ್ಯಾದಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ನಾಯ್ಕ್ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಸುಬ್ರಮಣ್ಯ ಭಟ್ ಹಲೇಜಿ ಗುತ್ತಿಗೆದಾರರು ಮೆಸ್ಕಾಂ, ಸಂದೀಪ್ ಕುಪ್ಪೆಟ್ಟಿ ಅಧ್ಯಕ್ಷರು ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ರಂಜಿತ್ ದರ್ಮಾಡಿ ಅವರು ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಸಂಪೂರ್ಣ ಖರ್ಚು- ವೆಚ್ಚವನ್ನು ಊರಿನ ಗಣ್ಯರಾದ ಅತುಲ್ ಕುಮಾರ್ ಹಲೇಜಿ ಮತ್ತು ಸುಧೀರ್ ಕುಮಾರ್ ಹಲೇಜಿ ಅವರು ನೀಡಿದರು.

ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ರೋಹಿತ್ ಶೆಟ್ಟಿ ಸ್ವಾಗತಿಸಿದರು, ಪ್ರವೀಣ್ ರೈ ವಂದಿಸಿದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya
error: Content is protected !!