25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು.

ಸುಮಾರು 47 ವಿದ್ಯಾರ್ಥಿಗಳಿಗೆ 55,000 ಸಾವಿರ ಮೊತ್ತದ ಪುಸ್ತಕ, ಬ್ಯಾಗ್, ಪೆನ್ನು,ಪೆನ್ಸಿಲ್ ಇತ್ಯಾದಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ನಾಯ್ಕ್ ವಹಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಸುಬ್ರಮಣ್ಯ ಭಟ್ ಹಲೇಜಿ ಗುತ್ತಿಗೆದಾರರು ಮೆಸ್ಕಾಂ, ಸಂದೀಪ್ ಕುಪ್ಪೆಟ್ಟಿ ಅಧ್ಯಕ್ಷರು ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ರಂಜಿತ್ ದರ್ಮಾಡಿ ಅವರು ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಸಂಪೂರ್ಣ ಖರ್ಚು- ವೆಚ್ಚವನ್ನು ಊರಿನ ಗಣ್ಯರಾದ ಅತುಲ್ ಕುಮಾರ್ ಹಲೇಜಿ ಮತ್ತು ಸುಧೀರ್ ಕುಮಾರ್ ಹಲೇಜಿ ಅವರು ನೀಡಿದರು.

ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ರೋಹಿತ್ ಶೆಟ್ಟಿ ಸ್ವಾಗತಿಸಿದರು, ಪ್ರವೀಣ್ ರೈ ವಂದಿಸಿದರು.

Related posts

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!