24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

ನಡ : ಇಲ್ಲಿಯ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಜೂ 4 ರಂದು ಸಂಭವಿಸಿದೆ.


ಇಲ್ಲಿನ ನಿವಾಸಿಗಳಾಗಿರುವ ಓಬಯ್ಯ ಗೌಡ ಹಾಗೂ ವಿಜಯ ಗೌಡ ಎಂಬವರ ಕುಟುಂಬಗಳ ಮದ್ಯೆ ಕಳೆದ 35 ವರ್ಷಗಳಿಂದ ರಸ್ತೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದವಿದ್ದು ಇದೇ ಕಾರಣಕ್ಕೆ ಎರಡೂ ಕುಟುಂಬಗಳ ಸದಸ್ಯರು ಭಾನುವಾರ ಕತ್ತಿ, ಹಾರೆ ಕೋಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಓಬಯ್ಯ ಗೌಡ ಅವರು ನೀಡಿರುವ ದೂರಿನಂತೆ ಮನೆಗೆ ಹೋಗುವ ರಸ್ತೆಯನ್ನು ಚರಳು ಹಾಕಿ ಸರಿಮಾಡುತ್ತಿದ್ದ ವೇಳೆ ಅವರ ನೆರೆಮನೆಯಲ್ಲಿರುವ ಚಿಕ್ಕಪ್ಪ ಪೂವಪ್ಪ ಗೌಡ ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ, ಕೃಷ್ಣಪ್ಪ ಗೌಡ ಅವರು ಅಲ್ಲಿಗೆ ಬಂದು ಮರದ ದೊಣ್ಣೆ, ಸರಳು, ಚೂರಿ, ಕಲ್ಲುಗಳಿಂದ ತಮ್ಮ ಮೇಲೆ ಹಾಗೂ ತಮ್ಮೊಂದಿಗಿದ್ದ ಬೇಬಿ ಗೌಡ, ಭವಾನಿ, ರಜನಿ, ಕೇಶವ ಗೌಡ, ಸುಧಾಕರ ಗೌಡ, ರವಿ ಗೌಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.


ಮತ್ತೊಂದು ಪ್ರಕರಣದಲ್ಲಿ ವಿಜಯ ಗೌಡ ಅವರು ಈ ಬಗ್ಗೆ ದೂರು ನೀಡಿದ್ದು ವ್ಯಾಜ್ಯ ಇರುವ ತಮ್ಮ ತೋಟದ ನಡುವೆ ಹಾದು ಹೋಗುವ ರಸ್ತೆಗೆ ಬಂದ ಓಬಯ್ಯ ಗೌಡ ಹಾಗೂ ಇತರರು ತೋಟದ ನಡುವೆ ರಸ್ತೆ ಸಮತಟ್ಟು ಮಾಡಲು ಮುಂದಾಗಿದ್ದು ಇದನ್ನು ಪ್ರಶ್ನಿಸಿದ ತನ್ನ ಮೇಲೆ ಹಾಗೂ ಬೊಬ್ಬೆ ಕೇಳಿ ಮನೆಯಿಂದ ಬಂದ ಪೂವಪ್ಪ ಗೌಡ, ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ,ಹಾಗೂ ಕೃಷ್ಣಪ್ಪ ಗೌಡ ಅವರ ಮೇಲೆ ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ‌ ಈ ಬಗ್ಗೆಯೂ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೀಗ ಎರಡೂ ಕಡೆಯವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!