July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

ನಡ : ಇಲ್ಲಿಯ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಜೂ 4 ರಂದು ಸಂಭವಿಸಿದೆ.


ಇಲ್ಲಿನ ನಿವಾಸಿಗಳಾಗಿರುವ ಓಬಯ್ಯ ಗೌಡ ಹಾಗೂ ವಿಜಯ ಗೌಡ ಎಂಬವರ ಕುಟುಂಬಗಳ ಮದ್ಯೆ ಕಳೆದ 35 ವರ್ಷಗಳಿಂದ ರಸ್ತೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದವಿದ್ದು ಇದೇ ಕಾರಣಕ್ಕೆ ಎರಡೂ ಕುಟುಂಬಗಳ ಸದಸ್ಯರು ಭಾನುವಾರ ಕತ್ತಿ, ಹಾರೆ ಕೋಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಓಬಯ್ಯ ಗೌಡ ಅವರು ನೀಡಿರುವ ದೂರಿನಂತೆ ಮನೆಗೆ ಹೋಗುವ ರಸ್ತೆಯನ್ನು ಚರಳು ಹಾಕಿ ಸರಿಮಾಡುತ್ತಿದ್ದ ವೇಳೆ ಅವರ ನೆರೆಮನೆಯಲ್ಲಿರುವ ಚಿಕ್ಕಪ್ಪ ಪೂವಪ್ಪ ಗೌಡ ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ, ಕೃಷ್ಣಪ್ಪ ಗೌಡ ಅವರು ಅಲ್ಲಿಗೆ ಬಂದು ಮರದ ದೊಣ್ಣೆ, ಸರಳು, ಚೂರಿ, ಕಲ್ಲುಗಳಿಂದ ತಮ್ಮ ಮೇಲೆ ಹಾಗೂ ತಮ್ಮೊಂದಿಗಿದ್ದ ಬೇಬಿ ಗೌಡ, ಭವಾನಿ, ರಜನಿ, ಕೇಶವ ಗೌಡ, ಸುಧಾಕರ ಗೌಡ, ರವಿ ಗೌಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.


ಮತ್ತೊಂದು ಪ್ರಕರಣದಲ್ಲಿ ವಿಜಯ ಗೌಡ ಅವರು ಈ ಬಗ್ಗೆ ದೂರು ನೀಡಿದ್ದು ವ್ಯಾಜ್ಯ ಇರುವ ತಮ್ಮ ತೋಟದ ನಡುವೆ ಹಾದು ಹೋಗುವ ರಸ್ತೆಗೆ ಬಂದ ಓಬಯ್ಯ ಗೌಡ ಹಾಗೂ ಇತರರು ತೋಟದ ನಡುವೆ ರಸ್ತೆ ಸಮತಟ್ಟು ಮಾಡಲು ಮುಂದಾಗಿದ್ದು ಇದನ್ನು ಪ್ರಶ್ನಿಸಿದ ತನ್ನ ಮೇಲೆ ಹಾಗೂ ಬೊಬ್ಬೆ ಕೇಳಿ ಮನೆಯಿಂದ ಬಂದ ಪೂವಪ್ಪ ಗೌಡ, ಲಲಿತ, ವಿಜಯ ಗೌಡ, ಶ್ರೀನಿವಾಸ ಗೌಡ,ಹಾಗೂ ಕೃಷ್ಣಪ್ಪ ಗೌಡ ಅವರ ಮೇಲೆ ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ‌ ಈ ಬಗ್ಗೆಯೂ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೀಗ ಎರಡೂ ಕಡೆಯವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!