April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.5 ರಂದು ಪೆರ್ಲ ರಾಜೀವ ಗಾಂಧಿ ಸೇವಾ ಕೇಂದ್ರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಮಾರ್ಗದರ್ಶನ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

ಒಡಿಶಾದ ರೈಲು ದುರಂತದಲ್ಲಿ ನಿಧನರಾದ ಪ್ರಯಾಣಿಕರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ದಿನಕರ ಯಮುನಾ, ರತ್ನಾ, ವನಿತಾ ಶೆಟ್ಟಿಗಾರ್, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪೆರ್ಲ ಶಾಲಾ ಮಕ್ಕಳು ಪ್ರಾರ್ಥಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವಾಗತಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya
error: Content is protected !!