22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.5 ರಂದು ಪೆರ್ಲ ರಾಜೀವ ಗಾಂಧಿ ಸೇವಾ ಕೇಂದ್ರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಮಾರ್ಗದರ್ಶನ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

ಒಡಿಶಾದ ರೈಲು ದುರಂತದಲ್ಲಿ ನಿಧನರಾದ ಪ್ರಯಾಣಿಕರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ದಿನಕರ ಯಮುನಾ, ರತ್ನಾ, ವನಿತಾ ಶೆಟ್ಟಿಗಾರ್, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪೆರ್ಲ ಶಾಲಾ ಮಕ್ಕಳು ಪ್ರಾರ್ಥಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವಾಗತಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
error: Content is protected !!